ಬೆಂಗಳೂರು : ಬಿಜೆಪಿ ನಾಯಕ ಶರತ್ ಬಚ್ಚೇಗೌಡ ಟಿಪ್ಪು ಜಯಂತಿಯನ್ನು ನಾವೇ ಮುಂದೆ ನಿಂತು ಆಚರಿಸುತ್ತೇವೆ ಎಂದು ಹೇಳಿದ್ದಾರೆ. ಹೊಸಕೋಟೆಯಲ್ಲಿ ನಡೆದ ಉರುಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಬಿಜೆಪಿ ಟಿಕೆಟ್ ಆಕಾಂಕ್ಷಿ ಶರತ್ ಬಚ್ಚೇಗೌಡ, ನಾವು ಟಿಪ್ಪು ಜಯಂತಿಯನ್ನು ಆಚರಿಸುತ್ತೇವೆ ಎಂದು ಹೇಳಿರುವುದು ಬಿಜೆಪಿ ಪಕ್ಷಕ್ಕೆ ಮುಜುಗರವುಂಟು ಮಾಡಿದೆ. ಟಿಪ್ಪು ಜಯಂತಿಯನ್ನು ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರದ್ದು ಪಡಿಸಲು ಮುಂದಾಗಿರುವಾಗ ಇಂತಹ ಹೇಳಿಕೆ ಬಂದಿರುವುದು ಸಂಚಲನ ಮೂಡಿಸಿದೆ.

ಹೊಸಕೋಟೆ ಕ್ಷೇತ್ರದಲ್ಲಿ ತಮಗೆ ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೂ ಉಪಚುನಾವಣೆಯಲ್ಲಿ ತಾನು ಸ್ಪರ್ದಿಸುವುದಾಗಿ ಬಿಜೆಪಿಯ ಯುವ ಮೋರ್ಚಾ ನಾಯಕರೂ ಆಗಿರುವ ಬಚ್ಚೇಗೌಡ ಹೇಳಿದ್ದಾರೆ.

2018 ರ ವಿಧಾನಸಭಾ ಚುನಾವಣೆಯಲ್ಲಿ ಹೊಸ್ಕೋಟೆಯಿಂದ ಬಿಜೆಪಿ ಅಭ್ಯರ್ಥಿಯಾಗಿ ಶ್ರೀ ಶರತ್ ಬಚ್ಚೆ ಗೌಡ ಸ್ಪರ್ಧಿಸಿದ್ದರು. ಆದರೆ ಕಾಂಗ್ರೆಸ್ ಅಭ್ಯರ್ಥಿ ಎನ್.ನಾಗರಾಜ್ ವಿರುದ್ಧ ಸೋತರು. ಈ ವರ್ಷದ ಆರಂಭದಲ್ಲಿ ವಿಧಾನಸಭೆಗೆ ರಾಜೀನಾಮೆ ನೀಡಿದ ಬಳಿಕ ಎನ್.ನಾಗರಾಜ್ ಅನರ್ಹರಾಗಿದ್ದಾರೆ. ಡಿಸೆಂಬರ್ 5 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಶ್ರೀ ನಾಗರಾಜ್ ಅವರನ್ನು ಕಣಕ್ಕಿಳಿಸುವ ಕೇಸರಿ ಪಕ್ಷದ ಯೋಜನೆಗಳನ್ನು ಶ್ರೀ ಶರತ್ ಬಚ್ಚೆ ಗೌಡ ತೀವ್ರವಾಗಿ ವಿರೋಧಿಸಿದ್ದಾರೆ.

Leave a Reply