ನವದೆಹಲಿ: ಜಮ್ಮು ಕಾಶ್ಮೀರ ರಾಜ್ಯಪಾಲರಾಗಿ ಕಳೆದ 14 ತಿಂಗಳಿಂದ ಕಾರ್ಯನಿರ್ವಹಿಸುತ್ತಿದ್ದ ಸತ್ಪಾಲ್ ಮಲ್ಲಿಕ್ ಅವರನ್ನು ಗೋವಾ ರಾಜ್ಯಪಾಲರಾಗಿ ವರ್ಗಾವಣೆಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದೆ.

ನವೆಂಬರ್ ಒಂದರಿಂದ ನೂತನ ಕೇಂದ್ರಾಡಳಿತ ಪ್ರದೇಶವಾಗಲಿರುವ ಇಲ್ಲಿಗೆ ನೂತನ ಲೆಫ್ಟಿನೆಂಟ್ ಗೌರ್ನರ್ ಆಗಿ ಗಿರೀಶ್ಚಂದ್ರ ಮುರ್ಮು ಹಾಗು ಲಡಾಕ್ ಲೆಫ್ಟಿನೆಂಟ್ ಗೌರ್ನರ್ ಆಗಿ ಆರ್. ಕೆ.ಮಾಥರ್ ನೇಮಕವಾಗಿದ್ದಾರೆ.

1985 ಬ್ಯಾಚ್ ಗುಜರಾತ್ ಕೇಡಾರ್ ನ ಐಎಎಸ್ ಅಧಿಕಾರಿಯಾಗಿರುವ ಮುರ್ಮು ಗುಜರಾತ್ ನಲ್ಲಿ ನರೇಂದ್ರ ಮೋದಿ ಸಿಎಂ ಆಗಿದ್ದ ವೇಳೆ ಅವರ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಒಡಿಶಾ ಮೂಲದವರಾದ ಇವರು ಪ್ರಸ್ತುತ ಭಾರತ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯ ಕಾರ್ಯದರ್ಶಿಯಾಗಿದ್ದಾರೆ.   ಬರ್ಮಿಂಗ್ ಹ್ಯಾಮ್ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿದ್ದಾರೆ. ನರೇಂದ್ರ ಮೋದಿ ಅವರಿಗೆ ಹೆಚ್ಚು ಆಪ್ತರಾಗಿದ್ದಾರೆ.

Leave a Reply