ಕೊಪ್ಪಳ : ಅಶ್ಲೀಲ ಹಾಡಿಗೆ ನಡು ಬೀದಿಯಲ್ಲಿ ಶಿಕ್ಷಕರು ಡ್ಯಾನ್ಸ್ ಮಾಡಿದ್ದು ವಿವಾದವಾಗಿದೆ. ಈ ಶಿಕ್ಷಕ ಶಿಕ್ಷಕಿಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳ ಬೇಕೆಂದು ಆಗ್ರಹಿಸಿ ನಾಗರೀಕ ಹಕ್ಕುಗಳಿಗಾಗಿ ಜನರ ಹೋರಾಟ ಸಂಘಟನೆಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ.

ಏನಿದು ಘಟನೆ

ಡಾ. ರಾಧಾಕೃಷ್ಣನ್ ಅವರ ಭಾವ ಚಿತ್ರದ ಮೆರವಣಿಗೆಯ ಸಂದರ್ಭದಲ್ಲಿ ಶಿಕ್ಷಕರು ಚುಟು ಚುಟು ಅಂತೈತೆ ಎಂಬ ಅಶ್ಲೀಲ ಹಾಡಿಗೆ ಕುಣಿದಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಅಸಭ್ಯ ಹಾಡಿಗೆ ಶಿಕ್ಷಕರು ಕುಣಿಯುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತ ಪಡಿಸಲಾಗಿತ್ತು. ಶಿಕ್ಷಕರ ಈ ವರ್ತನೆಯಿಂದ ಸಮಾಜವೇ ತಲೆ ತಗ್ಗಿಸುವಂತಾಗಿದೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಜರಗಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಪ್ರತಿವರ್ಷ ಶಿಕ್ಷಕರ ದಿನಾಚರಣೆ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ದಿನಾಚರಣೆಯಳ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ನಿಯಮಾವಳಿ ರೂಪಿಸಬೇಕು. ಸಾರ್ವಜನಿಕ ಕಾರ್ಯಕ್ರಮದಲ್ಲಿ ಲೌಡ್ ಸ್ಪೀಕರ್ ಬಳಕೆಗೆ ಅನುಮತಿಯನ್ನೂ ಪಡೆಯಲಾಗಿಲ್ಲ ಎಂದು ಜಿಲ್ಲಾಧಿಕಾರಿ ಸಿ.ಡಿ. ಗೀತಾ ಅವರಿಗೆ ಮನವಿ ಸಲ್ಲಿಸಲಾಗಿದೆ.

Leave a Reply