ಬೆಂಗಳೂರು: ಮೊದಲ ಬಾರಿಗೆ ಅದೃಷ್ಟ ಪರೀಕ್ಷೆಗೆ ನಿಂತಿದ್ದ ನಟ ಪ್ರಕಾಶ್ ರಾಜ್ ಅವರಿಗೆ ತೀವ್ರ ನಿರಾಸೆಯಾಗಿದ್ದು, ಈ ಫಲಿತಾಂಶ ನನಗೆ ಕಪಾಳಮೋಕ್ಷ ಮಾಡಿದಂತಾಗಿದೆ ಎಂದು ಹೇಳಿದ್ದಾರೆ. ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿದ್ದ ಪ್ರಕಾಶ್ ರಾಜ್ ಠೇವಣಿಯನ್ನು ಕಳೆದುಕೊಂಡಿದ್ದಾರೆ. ಫಲಿತಾಂಶದ ಕುರಿತಂತೆ ಪ್ರಕಾಶ್ ರಾಜ್, ‘ಈ ಫಲಿತಾಂಶ ನನ್ನ ಕಪಾಳಕ್ಕೆ ಜೋರಾಗಿ ಬಾರಿಸಿದಂತಾಗಿದೆ. ಅಸೂಯೆ.. ಟ್ರೋಲ್ಗಳು ಮಾತ್ರ ನನ್ನ ದಾರಿಗೆ ಬಂದಿವೆ. ಆದ್ರೆ ನಾನು ನನ್ನ ಜಾಗದಲ್ಲೇ ನಿಲ್ಲುತ್ತೇನೆ. ಸೆಕ್ಯುಲರ್ ಭಾರತಕ್ಕಾಗಿ ನನ್ನ ಹೋರಾಟವನ್ನು ಮುಂದುವರೆಸುತ್ತೇನೆ. ಮುಂದೆ ತೀವ್ರ ಕಠಿಣ ಪಯಣವಿದೆ, ಅದಕ್ಕೆ ಇದು ಪ್ರಾರಂಭ ಮಾತ್ರ. ನನ್ನ ಜೊತೆ ನಿಂತ ಎಲ್ಲರಿಗೂ ಧನ್ಯವಾದ ಎಂದು ಟ್ವೀಟ್ ಮಾಡಿದ್ದಾರೆ.
Home ರಾಜಕೀಯ ಸುದ್ದಿಗಳು / Political News ಈ ಫಲಿತಾಂಶ ನನಗೆ ಕಪಾಳಮೋಕ್ಷ ಮಾಡಿದಂತಿದೆ, ಆದರೂ ನಾ ಸುಮ್ಮನಿರಲ್ಲ ; ಪ್ರಕಾಶ್ ರಾಜ್