ಕೋಲ್ಕತ್ತಾ: ಟೀಂ ಇಂಡಿಯಾ ಅಂಡರ್ 19 ವಿಶ್ವಕಪ್ ತಂಡದ
ಫೇವರಿಟ್ ಆಟಗಾರನಾಗಿರುವ ಶುಭಮನ್ ಗಿಲ್ ಐಪಿಲ್ ನಲ್ಲಿ ಉತ್ತಮ ಪ್ರದರ್ಶನ ತೋರಿದ್ದು, ಕೆಕೆಆರ್ ತಂಡದ ಪರ ಅವರು ಆಡಿ ಎಲ್ಲರ ಗಮನ ಸೆಳೆದಿದ್ದಾರೆ.

ಈ ನಿಟ್ಟಿನಲ್ಲಿ ಕೆಕೆಆರ್ ತಂಡದ ನಾಯಕ ದಿನೇಶ್ ಕಾರ್ತಿಕ್ ಶುಭಮನ್ ಗಿಲ್ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.
ಅವರ ಸುತ್ತಲೂ ಹುಡುಗಿಯರು ಕಾಣಿಸಿಕೊಂಡ ವೇಳೆ ಇತರರು ಅಸೂಯೆ ಪಡುತ್ತಾರೆ ಎಂದು ಹೇಳಿದ್ದಾರೆ.ಚೊಚ್ಚಲ ಪಂದ್ಯದ ವೇಳೆ ಈ ಮಾತು ಹೇಳಿದ್ದರೆ, ಗಿಲ್ ರವರ ಪ್ರದರ್ಶನ ಕಂಡು, ಅವರೊಬ್ಬ ವಿಶೇಷ ಆಟಗಾರ. ಅವರಿಗೆ ಬಹಳ ದೊಡ್ಡ ಭವಿಷ್ಯವಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ಪರ ಮೊದಲ ಪಂದ್ಯವಾಡಿದ ಗಿಲ್ ಉತ್ತಮ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಕಾರಣರಾದರು. ಕೇವಲ 36 ಎಸೆತಗಳಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 57 ರನ್ ಗಳಿಸಿ ಅಜೇಯರಾಗುಳಿದಿದ್ದರು. ಕೋಲ್ಕತ್ತಾ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಗಿಲ್ ಆಕರ್ಷಕ ಅರ್ಧಶತಕದ ಬ್ಯಾಟಿಂಗ್ ಎಲ್ಲರ ಗಮನ ಸೆಳೆದಿದೆ.

Leave a Reply