ಕರ್ನಾಟಕದ ಕರಾವಳಿಯಲ್ಲಿ ಇಂದಿನಿಂದ ಮೂರು ದಿನ ಬಿಜೆಪಿ ಚಾಣಕ್ಯ ಅಮಿತ್ ಶಾ ಪ್ರವಾಸ ಕೈಗೊಂಡಿದ್ದಾರೆ.
ಜ್ವರ ಮತ್ತು ಮೈ ಕೈ ನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಅಮಿತ್ ಶಾ ಕಾರ್ಯಕರ್ತರನ್ನು ದೂರದಿಂದಲೇ ಕೈಯಾಡಿಸುತ್ತಾ ಹುರಿದುಂಬಿಸಿದರು. ಮಾತ್ರವಲ್ಲ, ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ಕೊಡಲು ಸಾಧ್ಯ ಆಗಿರಲಿಲ್ಲ.
ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ ಕ್ಷೇತ್ರಗಳಲ್ಲಿ ಅಮಿತ್ ಶಾ ಸಂಚಾರ ನಡೆಸಲಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಇಂದು ಬೆಳಿಗ್ಗೆ ಕುಕ್ಕೆ ದೇವರ ದರ್ಶನ ಪಡೆದರು.
ನಂತರ ವಿದ್ಯಾಪ್ರಸನ್ನ ಶ್ರೀಗಳನ್ನು ಅಮಿತ್ ಶಾ ಭೇಟಿ ಮಾಡಿದರು. ದೇವಸ್ಥಾನದಲ್ಲಿ ಆಶ್ಲೇಷ ಬಲಿ ಸೇವೆ ಮಾಡಿಸದೆ ಕೇವಲ ದರ್ಶನ ಪಡೆದರು. ವಿಶೇಷ ಪೂಜೆ ಮಾಡಿಸಿದರು.
ಕೇರಳದ ಚೆಂಡೆ ವಾದನಗಳ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಗಿತ್ತು. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್, ಸಂಸದ ನಳಿನ್ಕುಮಾರ್ ಕಟೀಲ್ ಉಪಸ್ಥಿತರಿದ್ದರು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ನವಶಕ್ತಿ ಸಮಾವೇಶ ಮೂಲಕ ಅಮಿತ್ ಶಾ ಚುನಾವಣಾ ಪ್ರಚಾರಕ್ಕೆ ರಣತಂತ್ರ ರೂಪಿಸಲಿದ್ದಾರೆ.
ಕರಾವಳಿ ಕರ್ನಾಟಕವನ್ನು ಸಂಪೂರ್ಣ ಬಿಜೆಪಿ ತೆಕ್ಕೆಗೆ ಹಾಕಿಕೊಳ್ಳುವ ಉದ್ದೇಶದಿಂದ ಈ ವಿಶೇಷ ಪ್ರವಾಸ ಕೈಗೊಳ್ಳಲಾಗಿದೆ ಎನ್ನಲಾಗಿದೆ.