ಮುಂಬರುವ ವಿಧಾನ ಸಭಾ ಚುನಾವಣೆಗೆ ಬಿಜೆಪಿ ವರಿಷ್ಠರು ರಚಿಸಿದ ತಾರಾ ಪ್ರಚಾರಕರ ಪಟ್ಟಿಯಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆಗೆ ಆರನೇ ಸ್ಥಾನ ನೀಡಿದ ಬೆನ್ನಲ್ಲೇ ರಾಜ್ಯ ಬಿಜೆಪಿ ಘಟಕದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

ಮೊದಲ 6 ಸ್ಥಾನದಲ್ಲಿ ‌ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್, ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ನಂತರದ ಸ್ಥಾನದಲ್ಲಿ ಹಲವಾರು ಘಟಾನುಘಟಿಗಳ ಹೆಸರನ್ನು ಬಿಟ್ಟು ಅನಂತ್ ಕುಮಾರ್ ಹೆಗ್ಡೆ ಹೆಸರು ಬಂದ್ದರಿಂದ ರಾಜ್ಯ ಬಿಜೆಪಿ ಪಾಳಯದಲ್ಲಿ ಅಸಮಾಧಾನ ವ್ಯಕ್ತವಾಗಲು ಕಾರಣವಾಗಿದೆ.

ಮಾಜಿ ಮುಖ್ಯಮಂತ್ರಿ ಹಿರಿಯ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಕೇಂದ್ರ ನೀರು ಮತ್ತು ನೈರ್ಮಲ್ಯ ಖಾತೆ ರಾಜ್ಯ ಸಚಿವ, ದಲಿತ ಸಮುದಾಯದ ಹಿರಿಯ ನಾಯಕ ರಮೇಶ ಜಿಗಜಿಣಗಿ, ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌, ರಾಜ್ಯದಿಂದ ಆಯ್ಕೆಯಾದ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌, ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್‌, ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪರಂತಹ ಹಿರಿಯ ನಾಯಕರುಗಳು ಹೆಗಡೆ ನಂತರದ ಸ್ಥಾನದಲ್ಲಿದ್ದಾರೆ.

Leave a Reply