ವಿಧಾನ ಸಭಾ ಚುನಾವಣೆ ಇನ್ನೇನು ಹತ್ತಿರ ಬರುತ್ತಿದೆ. ಬಿಜೆಪಿಗೆ ಯಾರು ಮತ ಹಾಕಬೇಡಿ ಪ್ರಧಾನಿ ಮೋದಿಗೆ ಈ ರಾಜ್ಯದಲ್ಲಿ ಅವಕಾಶ ಕೊಡಬಾರದು, ರಾಜ್ಯದಲ್ಲಿ ಬಿಜೆಪಿಗೆ ಒಂದು ಕಡೆಯೂ ಅಧಿಕಾರಕ್ಕೆ ಬರಬಾರದು ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್‌ಎಸ್ ದೊರೆಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಕರ್ತೆ ಗೌರಿ ಲಂಕೇಶ್‍ಗೆ ಜನ್ಮದಿನ ಪ್ರಯುಕ್ತ ಆಚರಿಸಲಾಗಿದ್ದ `ಗೌರಿ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮೋದಿ ಹಾಗೂ ಬಿಜೆಪಿ ಪಕ್ಷದ ವಿರುದ್ಧ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸುತ್ತಾ, ನನ್ನ ಹಾಗೂ ಗೌರಿ ಲಂಕೇಶ್ ಅವರ ಒಡನಾಟ ಕೆಲ ದಿನಗಳಾದರೂ, ನಮ್ಮ ನಡುವಿನ ಸ್ನೇಹ ಬಾಂಧವ್ಯ ಗಾಢವಾದದ್ದು. ಅವರ ಕೆಲವು ದೌರ್ಬಲ್ಯಗಳ ಮಧ್ಯೆಯೂ ದೊಡ್ಡ ಹಾಗೂ ವಿಭಿನ್ನ ಅಲೋಚನೆಗಳು, ಕೆಲಸಗಳು ಮಾಡುತ್ತಿದ್ದರು ಎಂದು ಹೇಳಿದರು.

ಇದೇ ಮಾತನಾಡಿದ ಅವರು ವೇಳೆ ಗೌರಿ ಹಂತಕರು ಬಂದೂಕು ತಯಾರಿಸುವವರು ಆಗಿರಬಹುದು ಹೀಗಾಗಿ ದಕ್ಷಿಣ ಕನ್ನಡದ ಮೇಲೆ ಒಂದು ಕಣ್ಣಿಡಬೇಕು. ಪೋಲಿಸರು ಯಾರೋ‌ ಇಬ್ಬರನ್ನು ಹಿಡಿದಿದ್ದೇವೆ ಎಂದು ಹೇಳುತ್ತಿದ್ದಾರೆ, ಹಿಡಿದರೆ ಸಾಲದು ಗೌರಿಯನ್ನು ಕೊಲ್ಲಲು ಸುಪಾರಿ ಕೊಟ್ಟವರು ಯಾರು ಮೊದಲು ಗೊತ್ತಾಗಬೇಕು ಎಂದು ಆಗ್ರಹಿಸಿದರು.

Leave a Reply