ಬೆಂಗಳೂರು:2014ರ ನಂತರ ದೇಶದಲ್ಲಿ ನಡೆದ ರೈತರ ಆತ್ಮಹತ್ಯೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜಕೀಯ ನಾಯಕರೇ ಕಾರಣ ಎಂದು ನಟ ಪ್ರಕಾಶ್ ರೈ ಹೇಳಿದ್ದಾರೆ.

ಬುಧವಾರ ನ್ಯಾಷನಲ್ ಕಾಲೇಜು ಮೈದಾನದಲ್ಲಿ ರೈತರ ಬೃಹತ್ ಸಮಾವೇಶದಲ್ಲಿ ಮಾತನಾಡುತ್ತಾ, ರೈತರು ,ಕೌಟುಂಬಿಕ ಹಾಗೂ ಅನಾರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡುತ್ತಿಲ್ಲ. ನಿಜವಾಗಿ ರೈತರದು ಆತ್ಮಹತ್ಯೆ ಅಲ್ಲ. ಅದು ಕೊಲೆ. ಈ ಕೊಲೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜಕೀಯ ನಾಯಕರೇ ಕಾರಣ ಎಂದು ನಟ ಪ್ರಕಾಶ್ ರೈ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಚುನಾವಣೆ ವೇಳೆ ನರೇಂದ್ರ ಮೋದಿ ಅವರು ನಾನು ರೈತರೊಂದಿಗೆ ಜೊತೆಗಿದ್ದೇನೆ ಎಂದು ಭರವಸೆ ನೀಡಿದ್ದರು. ಅಧಿಕಾರ ಹಿಡಿದು ಮೂರೂವರೆ ವರ್ಷ ಕಳೆದರೂ ಯಾವ ಭರವಸೆಯನ್ನೂ ಈಡೇರಿಸಿಲ್ಲ. ಜನ ಪ್ರಶ್ನೆ ಕೇಳಿದರೆ ಕೇಂದ್ರ ಸರ್ಕಾರದವರು ರಾಜ್ಯ ಸರ್ಕಾರದತ್ತ, ರಾಜ್ಯ ಸರ್ಕಾರದವರು ಕೇಂದ್ರ ಸರ್ಕಾರದತ್ತ ಪರಸ್ಪರ ಬೊಟ್ಟು ಮಾಡಿ ತೋರಿಸುತ್ತಾರೆ ಎಂದು ಕಿಡಿ ಕಾರಿದರು.

Leave a Reply