ಗೌರಿ ಲಂಕೇಶ್ ಹುಟ್ಟಿದ ದಿನವಾದ ನಿನ್ನೆ ಗೌರಿ ಸ್ಮಾರಕ ಟ್ರಸ್ಟ್ ವತಿಯಿಂದ ‘ಗೌರಿ’ ದಿನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹೆಚ್ಚಿನ ಅತಿಥಿಗಳು ಮೋದಿಗೆ, ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ಧ ಕಿಡಿಕಾರುವ ದಿನವಾಗಿ ಮಾರ್ಪಟ್ಟಿತೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಆರೋಪ ಪ್ರತ್ಯಾರೋಪಗಳು ಬರತೊಡಗಿದೆ. ಎಲ್ಲದಕ್ಕು ಮೋದಿಗೇಕೆ ಬೈಯೋದು?’ ಎಂದು ಪ್ರಶ್ನಿಸಿದ್ದಾರೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಸ್‌ಎಸ್ ದೊರೆಸ್ವಾಮಿ ಅವರು ಮೋದಿ ಹಾಗೂ ರಾಜ್ಯ ಬಿಜಪಿ ವಿರುದ್ಧ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ರಾಜ್ಯದಿಂದ ಬಿಜೆಪಿಯನ್ನು ಒದ್ದು ಓಡಿಸಬೇಕು, ಮೋದಿಗೆ ಈ ರಾಜ್ಯದಲ್ಲಿ ಅವಕಾಶ ಕೊಡಬಾರದೆಂದು ರಾಜ್ಯದ ಜನರಿಗೆ ಮನವಿ ಮಾಡಿದ್ದಾರೆ. ಅಂತೆಯೇ ನಟ ಪ್ರಕಾಶ್ ರೈ ಕೂಡ ಬಿಜೆಪಿ ಹಾಗೂ ಅನಂತ್ ಕುಮಾರ್ ಹೆಗಡೆ ಅವರು ಸಂವಿಧಾನ ವಿರೋಧಿ ನೀಡಿದ ಹೇಳಿಕೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಇನ್ನೂ ಕಾರ್ಯಕ್ರಮ ಮುಗಿದ ಸಾಮಾಜಿಕ ಜಾಲತಾಣದಲ್ಲಿ ಎಂದಿನಂತೆ ಹಗ್ಗಜಗ್ಗಾಟ ನಡೆದಿದೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧವು ಮೋದಿ ಬೆಂಬಲಿಗರು ಹಾಗೂ ಫೇಸ್‌ಬುಕ್‌ ಬಳಕೆದಾರರು ಹರಿದಾಯ್ದಿದ್ದಾರೆ.

Leave a Reply