ಬೆಂಗಳೂರು: 2018ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮಹಾಸಭಾ150 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದೆ.
ಬಿಜೆಪಿ ಹಿದುತ್ವದಲ್ಲಿ ಬದ್ಧತೆ ಕಳಕೊಂಡಿದೆ. ಆದ್ದರಿಂದ ಹಿಂದೂ ಮಹಾ ಸಭಾ ಬಿಜೆಪಿಯನ್ನು ಸೈದ್ದಂತಿಕ ಮಿತ್ರ ಪಕ್ಷ ಎಂದು ಪರಿಗಣಿಸುವುದಿಲ್ಲ. ಆದ್ದರಿಂದ ನಾವು ಫೆಬ್ರವರಿ ತಿಂಗಳಲ್ಲಿ ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದೇವೆ ಎಂದು ರಾಜ್ಯಾಧ್ಯಕ್ಷ ಎನ್ ಸುಬ್ರಹ್ಮಣ್ಯ ರಾಜು ಹೇಳಿದ್ದಾರೆ.
ಸಿದ್ದರಾಮಯ್ಯ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುತ್ತಿದ್ದಾರೆ, ಆದರೆ ಕೇವಲ ಎಸ್ ಡಿಪಿಐ ಹಾಗೂ ಪಿಎಫ್ಐ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆಯುವುದರಿಂದಷ್ಟೇ ಕಾಂಗ್ರೆಸ್ ಅಥವಾ ಸಿದ್ದರಾಮಯ್ಯ ಗೆಲ್ಲುವುದಿಲ್ಲ ಎಂದು ರಾಜು ಮುಖ್ಯ ಮಂತ್ರಿಯನ್ನು ಟೀಕಿಸಿದ್ದಾರೆ.