ಬಾಗಲಕೋಟೆ: ನಮ್ಮ ಸರ್ಕಾರ ಇಡೀ ದೇಶದಲ್ಲಿ ಮಾದರಿ ಸರಕಾರವಾಗಿತ್ತು. ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಸಾಮಾಜಿಕ ನ್ಯಾಯ ಕೊಡುವಂತಹ ಕೆಲಸ ಮಾಡಲಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಬಾದಾಮಿ ಕ್ಷೇತ್ರದಲ್ಲಿ 5 ದಿನಗಳ ಪ್ರವಾಸ ಕೈಗೊಂಡಿರುವ ಸಿದ್ದರಾಮಯ್ಯ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಇಂದು ಯತೀಂದ್ರ ಸಿದ್ದರಾಮಯ್ಯ ತಮ್ಮ ತಂದೆಯ ಪರ ಮಾತನಾಡಿದರು.

ಚಾಮುಂಡೇಶ್ವರಿ ಜನರು ಹಣ ತೋಳ್ಬಲಕ್ಕೆ ಮಾರುಹೋಗಿ ಷಢ್ಯಂತ್ರಕ್ಕೆ ಬಲಿಯಾದರು.ಆದರೆ ಬಾದಾಮಿ ಕ್ಷೇತ್ರದ ಜನತೆ ಯಾವುದಕ್ಕೂ ಮಾರುಹೋಗದೆ ತಂದೆಯನ್ನು ಗೆಲ್ಲಿಸಿಕೊಟ್ಟಿದಕ್ಕೆ ಚಿರ ಋಣಿಯಾಗಿದ್ದೇನೆ.ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದಾಗಿ ಭರವಸೆ ನೀಡಿದರು.

Leave a Reply