ಹುಬ್ಬಳ್ಳಿ: ಅಲ್ಪರಿಗೆ ಅಧಿಕಾರ ನೀಡಿದರೆ, ಒಳ್ಳೆಯವರನ್ನು ಅವರು ಓಡಿಸುತ್ತಾರೆ ಎಂದು ಬಿಜೆಪಿ ಮುಖಂಡ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ಈ ಮಾತನ್ನು ಯೋಗಿ ವೇಮನ ತಮ್ಮ ವಚನದಲ್ಲಿ ಹೇಳಲಾಗಿದೆ ಎಂದು ಉಲ್ಲೇಖ ಮಾಡಿದ ಅವರು, ನನ್ನ ವಿಷಯದಲ್ಲಿ ಈ ಮಾತು ಅಕ್ಷರಶಃ ನಿಜವಾಗಿದೆ. ಚಪ್ಪಲಿ ತಿನ್ನುವ ಅಭ್ಯಾಸವಿರುವ ನಾಯಿಗೆ ಕಬ್ಬಿನ ರುಚಿಯ ಮಹತ್ವ ಅರಿವಾಗುವುದಿಲ್ಲ ಎಂದು ನಗರದಲ್ಲಿ ಮಂಗಳವಾರ ಹೇಮರೆಡ್ಡಿ ಮಲ್ಲಮ್ಮ ಮಹಿಳಾ ಸಂಘದಿಂದ ಆಯೋಜಿಸಿದ್ದ ಯೋಗಿ ವೇಮನ ಜಯಂತ್ಯುತ್ಸವದಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

“ನಾನು ಕಷ್ಟದಲ್ಲಿದ್ದಾಗ ನನ್ನ ಜನಾಂಗದ ಪ್ರತಿಯೊಬ್ಬರೂ ನನಗಾಗಿ ಪ್ರಾರ್ಥಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಬಳ್ಳಾರಿಯ ಕಾರ್ಯಕ್ರಮದಲ್ಲಿ ನನ್ನ ವಿರುದ್ಧ ಮಾತನಾಡಲು ಮುಂದಾದಾಗ ಅಲ್ಲಿನ ಜನ ಎದ್ದು ನಿಂತು, ರೆಡ್ಡಿ ವಿರುದ್ಧ ಮಾತನಾಡಬೇಡಿ. ಅವರ ವಿರುದ್ಧ ಮಾತನಾಡಿದರೆ ನೀವು ಸೋಲುತ್ತೀರಿ ಎಂದಿದ್ದಾರೆ ಎಂದು ಕೇಳಿದ್ದೇನೆ. ಇದಕ್ಕಿಂತ ದೊಡ್ಡ ಭಾಗ್ಯ ಬೇಕೆ?’ ಎಂದು ಹೇಳಿದ್ದಾರೆ.

Leave a Reply