ವಿಜಯಪುರ: ಸಿದ್ದರಾಮಯ್ಯ ಬಿಜೆಪಿ ಸೇರಿದರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದು ಮಾಜಿ ಸಿಎಂ ಕುಮಾರ ಸ್ವಾಮಿ ಹೇಳಿದ್ದಾರೆ.

40 ರಿಂದ 50 ಸೀಟ್ ಪಡೆದು ಅವರು ಬಿಜೆಪಿ ಸೇರಿದರೆ ಆಶ್ಚರ್ಯ ಪಡಬೇಕಾಗಿಲ್ಲ. ಆದ್ದರಿಂದ ಅಲ್ಪಸಂಖ್ಯಾತರು ಅವರಿಗೆ ಓಟು ಹಾಕುವಾಗ ಸೂಕ್ಷ್ಮವಾಗಿರಬೇಕು ಎಂದು ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ
ಬಸವನ ಬಾಗೇವಾಡಿ ತಾಲೂಕಿನ ಆಲಮಟ್ಟಿಯಲ್ಲಿ ಶುಕ್ರವಾರ ಮಾತನಾಡುತ್ತಾ, ಇದನ್ನು ನಾನು ತಮಾಶೆಗೆ ಹೇಳುತ್ತಿಲ್ಲ. ಸಿದ್ದರಾಮಯ್ಯ ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ ಎಂದು ಟೀಕಿಸಿಸಿದರು.

ಕಾಂಗ್ರೆಸ್​ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದಂತೆ ಹೈ ಕಮಾಂಡ್​ಗೆ ಟಿಕೆಟ್ ಕೊಡುತ್ತದೆ. ಅವರ ಅಭಿಮಾನಿಗಳಿಗೆ ಸೀಟು ಕೊಟ್ಟು ಅತಂತ್ರ ಪರಿಸ್ಥಿತಿ ನಿರ್ಮಾಣವಾದರೆ ಸಿದ್ದರಾಮಯ್ಯ ಮೊದಲು ನರೇಂದ್ರ ಮೋದಿ ಬಳಿ ಹೋಗಿ ನಿಲ್ಲುತ್ತಾರೆ ಎಂದಿದ್ದಾರೆ.

Leave a Reply