ಸಾಂಧರ್ಭಿಕ ಚಿತ್ರ

ಬೆಂಗಳೂರು : ಬೆಂಗಳೂರು ಬಿಲ್ಲವ ಅಸೋಸಿಯೇಶನ್ ಹಮ್ಮಿಕೊಂಡ ಕಾರ್ಯಕರ್ಮದಲ್ಲಿ ಮಾತನಾಡಿದ ಬೆಂಗಳೂರು ಬಿಲ್ಲವ ಸಂಘದ ಅಧ್ಯಕ್ಷ ಎಂ ವೇದಕುಮಾರ್ ಬಿಲ್ಲವ ಯುವಕರಿಗೆ ಕಿವಿ ಮಾತು ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವಕರು ದಾರಿ ತಪ್ಪುತ್ತಿದ್ದು, ಈ ಬಗ್ಗೆ ಸಭೆ ಸೇರಿ ಚರ್ಚಿಸಲಾಗಿದೆ. ಈ ಸಭೆಯಲ್ಲಿ ಕೊಲೆಯಾಗಬೇಡಿ, ಕೊಲೆ ಮಾಡಬೇಡಿ ಎಂದು ಬಿಲ್ಲವ ಸಮಾಜದ ಯುವಕರಿಗೆ ಕರೆ ನೀಡಲಾಯಿತು ಎಂದು ಹೇಳಿದರು.

ಬೆಂಗಳೂರು ಐಟಿ ಬಿಟಿ ಇಂಜಿನಿಯರ್ ವೈದ್ಯಕೀಯ ಸೇರಿದಂತೆ ಇನ್ನಿತರ ಕ್ಷೇತ್ರದಲ್ಲಿ ದುಡಿಯುತ್ತಿರುವ ಬಿಲ್ಲವ ಸಮಾಜದ ಯುವಕರು ದಕ್ಷಿಣ ಕನ್ನಡಕ್ಕೆ ಹೋದ ಸಂದರ್ಭದಲ್ಲಿ ಅಲ್ಲಿನ ಯುವಕರಿಗೆ ಬುದ್ದಿವಾದ ನೀಡಬೇಕೆಂದು ಅವರು ಸಲಹೆ ನೀಡಿದರು.

Leave a Reply