ನಾನಾಗಿದ್ದರೆ ನೀರವ್ ಮೋದಿಯನ್ನು ದೇಶ ಬಿಟ್ಟು ಹೋಗಲು ಬಿಡುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ನಮ್ಮ ಮೇಲಿನ ಮೋದಿಯವರ ಆರೋಪ ನಿರಾಧಾರವಾಗಿದೆ. ಸ್ವತಃ ಲೂಟಿ ಮಾಡಿ ಜೈಲಿಗೆ ಹೋದವರನ್ನು ಪಕ್ಕದಲ್ಲಿ ಕೂರಿಸಿ ಭ್ರಷ್ಟಾಚಾರದ ವಿರುದ್ಧ ಮಾತಾಡುತ್ತಾರೆ ಎಂದು ಟೀಕಿಸಿದ್ದಾರೆ.
ಪಂಜಾಬ್ ನ್ಯಾಷನಲ್ ಬ್ಯಾಂಕಿನಿಂದ ನೀರವ್ ಮೋದಿ 11,000 ಕೋಟಿ ಟೋಪಿ ಹಾಕಿ ಹೋಗಿದ್ದಾನೆ. ಏನ್ ಮಾಡಿದರೂ ಇವರ ಕುಮ್ಮಕ್ಕಿಲ್ಲದೇ ಓಡಿ ಹೋಗಿದ್ದಾರಾ? ನಾನಾಗಿದ್ದರೆ ಖಂಡಿತ ದೇಶದಿಂದ ಹೊರಹೋಗಲು ಬಿಡುತ್ತಿರಲಿಲ್ಲ. ನರೇಂದ್ರ ಮೋದಿ ಪ್ರಧಾನಿ ಹುದ್ದೆಯಲ್ಲಿ ಮುಂದುವರಿಯಲು ಅನರ್ಹ ಎಂದು ಹೇಳಿದರು.