ಬಲಿಯಾ (ಉತ್ತರ ಪ್ರದೇಶ): ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಬಿಜೆಪಿ ಸರ್ಕಾರ ಮತ್ತೊಮ್ಮೆ ಸುದ್ದಿಯಾಗಿದೆ. ಇದೀಗ ಅವರ ಸರಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ನಾನು ಈ ವಿಷಯಗಳ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಮಾತನಾಡಿದ್ದೇನೆ” ಎಂದು ಅವರ ಸಂಪುಟದ ಸಚಿವ ಓಂ ಪ್ರಕಾಶ್ ರಾಜ್ಭರ್ ಆರೋಪಿಸಿದ್ದಾರೆ.
ಇದೊಂದು ಕೀಳುಮಟ್ಟದ ಪ್ರಚಾರವನ್ನು ಪಡೆದುಕೊಳ್ಳುವ ಪ್ರಯತ್ನ ಎಂದು ಬಿಜೆಪಿ ವಕ್ತಾರ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ಹಿಂದಿನ ಎಸ್ಪಿ ಮತ್ತು ಬಿಎಸ್ಪಿ ಸರಕಾರಕ್ಕೆ ಹೋಲಿಸಿದರೆ ಬಿಜೆಪಿ ಆಳ್ವಿಕೆಯಡಿಯಲ್ಲಿ ಹೆಚ್ಚು ಭ್ರಷ್ಟಾಚಾರಇದೆ. ನಾನು ಈ ಸರಕಾರದ ಭಾಗವಾಗಿದ್ದರೂ, ಇದು ನನ್ನ ಸರಕಾರವಲ್ಲ. ನಾವು ಬಿಜೆಪಿಯೊಂದಿಗೆ ಮೈತ್ರಿ ಹೊಂದಿದ್ದೇವೆ “ಎಂದು ಶ್ರೀ ರಾಜ್ಭಾರ್ ಹೇಳಿದ್ದಾರೆ. ಇವರು, ಆಡಳಿತಾರೂಢ ಮಿತ್ರ ಪಕ್ಷ ಸುಹೆಲ್ದೇವ್ ಭಾರತೀಯ ಸಮಾಜ ಪಕ್ಷದ (ಎಸ್ಬಿಎಸ್ಪಿ) ಮುಖ್ಯಸ್ಥರೂ ಆಗಿದ್ದಾರೆ. ಈ ಪಕ್ಷದ ಜತೆ ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿತ್ತು. ಕಾಸ್ಗಂಜ್ನಲ್ಲಿ ನಡೆದ ಹಿಂಸಾಚಾರಕ್ಕೆ ರಾಜ್ಭರ್ ಮರುಕ ವ್ಯಕ್ತಪಡಿಸಿದ್ದಾರೆ.